ಲಘು ನ್ಯುಮೋನಿಯಾ ಲಕ್ಷಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ರಾತ್ರಿ ಲಘು ನ್ಯುಮೋನಿಯಾ ಲಕ್ಷಣಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಐಸಿಯುನಲ್ಲಿರುವ ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರ ಉಸಿರಾಡಲು ಅನುಕೂಲವಾಗುವಂತೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

ಆಕೆ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ ಆಸ್ಪತ್ರೆ ಹಳೆ ವಿಮಾನ ನಿಲ್ದಾಣ ರಸ್ತೆಯ ಪಲ್ಮನಾಲಜಿ ಸಮಾಲೋಚಕ ಡಾ.ಗುರುಪ್ರಸಾದ್ ಭಟ್ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.