ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಛತಾ ಶ್ರಮದಾನ

ಉಡುಪಿ: ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಿಕ್ಷಣ ವಿಭಾಗ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಶಾಲಾ ವಠಾರದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಊರಿನ 15 ಕ್ಕೂ ಹೆಚ್ಚಿನ ಸಂಘಸಂಸ್ಥೆಗಳ 80 ಕ್ಕೂ ಹೆಚ್ಚು ಸದಸ್ಯರು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

31ನೇ ತೋನ್ಸೆ ಗ್ರಾಮ ಪಂಚಾಯತ್ ಕೆಮ್ಮಣ್ಣು, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘ, ಕೆಮ್ಮಣ್ಣು, ನಿರ್ಮಲ ತೋನ್ಸೆ, ಹೂಡೆ, ಸೌಹಾರ್ದ ಸಮಿತಿ, ಕೆಮ್ಮಣ್ಣು, ಸ್ವಚ್ಛ ಭಾರತ್ ಫ್ರೆಂಡ್ಸ್, ಲಯನ್ಸ್ ಕ್ಲಬ್ ಕಲ್ಯಾಣಪುರ, ರೋಟರಿ ಕ್ಲಬ್ ಕಲ್ಯಾಣಪುರ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸ್ವಸಹಾಯ ಸಂಘಗಳ ಒಕ್ಕೂಟ ಕೆಮ್ಮಣ್ಣು, ರಿಕ್ಷಾ ಚಾಲಕರು ಮತ್ತು ಮಾಲಕರು ಹಂಪನಕಟ್ಟೆ ಹಾಗೂ ಫುಟ್ಬಾಲ್ ಫ್ರೆಂಡ್ಸ್ , ಹಂಪನಕಟ್ಟೆ ಇವರ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸತೀಶ್ ಶೆಟ್ಟಿ ಕೆಮ್ಮಣ್ಣು , ನಂದ ಕಿಶೋರ್ ಕೆಮ್ಮಣ್ಣು ಮತ್ತಿತರರು ಕಾರ್ಯಕ್ರಮದ ಆಯೋಜನೆಯ ಜವಾಬ್ದಾರಿಯನ್ನು ವಹಿಸಿದ್ದರು.