ತಿಂಗಳಿಗೆ 15 ದಿನ ಅರಣ್ಯದಲ್ಲೇ ಇರಿ: ಹಿರಿಯ ಅರಣ್ಯ ಇಲಾಖಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ನಿರ್ದೇಶನ

ಬೆಂಗಳೂರು: ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳಿಂದ ಹಿಡಿದು ಪ್ರಧಾನ ಕಾರ್ಯದರ್ಶಿವರೆಗಿನ ಎಲ್ಲ ಅರಣ್ಯ ಇಲಾಖಾಧಿಕಾರಿಗಳು ತಿಂಗಳಲ್ಲಿ 15 ದಿನಗಳ ಕಾಲ ಅರಣ್ಯದಲ್ಲಿ ಇರುವಂತೆ ಶನಿವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

“ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲೆ ನೆಲೆಸಿದ್ದಾರೆ. ನೀವು ನಿಮ್ಮ ಕಛೇರಿಯಿಂದ ಹೊರಗೆ ಬರುತ್ತಿಲ್ಲ. ಕಾಡಿಗೆ ಹೋಗಿ, ತಿಂಗಳಿಗೆ 15 ದಿನ ಅಲ್ಲೇ ಇರಿ. ಇದು ಇಲಾಖೆಯ ಇತರ ಸಿಬ್ಬಂದಿಗಳ ನೈತಿಕತೆಯನ್ನು ಹೆಚ್ಚಿಸುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತದೆ” ಎಂದು ಬೊಮ್ಮಾಯಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.