ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ಬೇಡಿಕೆ ಇಟ್ಟಿರುವುದು ಸತ್ಯ: ಈಶ್ವರಪ್ಪ

ಬೆಂಗಳೂರು: ಪಕ್ಷದ ಕೆಲವು ಶಾಸಕರು ದೆಹಲಿಗೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಡಿ ಎಂಬ ಬೇಡಿಕೆ ಇಟ್ಟಿರುವುದು ಸತ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ನಾಯಕತ್ವ ಬದಲಾವಣೆ ವಿವಾದ ಶಮನ ಮಾಡಲು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಅವರ ರಾಜ್ಯದ ಭೇಟಿಗೆ ಮೊದಲೇ ಈಶ್ವರಪ್ಪ ಅವರು ಈ ಹೇಳಿಕೆ ನೀಡಿರುವುದು ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಯಡಿಯೂರಪ್ಪನವರೇ 2ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ. ಇನ್ನು ಕೆಲವರು ಬದಲಾಯಿಸಬೇಕು ಎನ್ನುತ್ತಿದ್ದಾರೆ. ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ ಎಂದರು.