ಉಡುಪಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ದೂರು ದಾಖಲು

ಉಡುಪಿ : ಇಲ್ಲಿನ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌನ್ಯದ ಚಿನ್ನದ ಗಿಂಡಿ ಕಳವಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣದ ವಿವರ:

ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ ಮಠದ 6 ವಿದ್ಯಾರ್ಥಿಗಳು ಮತ್ತು ಪುರೋಹಿತರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದಿಡುವ ಸಂದರ್ಭದಲ್ಲಿ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ.

ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಅವರು ಪೂಜೆಯ ನಂತರ ಸಾಮಾಗ್ರಿಗಳನ್ನು ತೆಗೆದಿಡುವಾಗ ಪೂಜೆಗೆ ಬಳಸುವ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿರುವ ಬಗ್ಗೆ ತಿಳಿದಿದೆ.

ಈ ಕುರಿತು ನಗರ ಠಾಣೆಗೆ ದೂರು ನೀಡಲಾಗಿದ್ದು, ಈ ಗಿಂಡಿಯ ಅಂದಾಜು ಬೆಲೆ 7 ಲಕ್ಷ ರೂ. ಇರಬಹುದು ಎಂದು ವಿಷ್ಣುಮೂರ್ತಿ ಅವರು ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.