ಮಂಗಳೂರು: ಬಸ್ ನಿಂದ ಆಯತಪ್ಪಿ ರಸ್ತೆಗೆ ಬಿದ್ದು ಕಂಡಕ್ಟರ್ ಮೃತ್ಯು

ಮಂಗಳೂರು: ಇಲ್ಲಿನ ಸಿಟಿಬಸ್ ನಲ್ಲಿ ಬಾಗಿಲ ಬಳಿ ನಿಂತಿದ್ದ ಬಸ್ ಕಂಡಕ್ಟರ್ ಆಯತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಮಂಗಳವಾರದಂದು ನಂತೂರ್ ಸರ್ಕಲ್ ಬಳಿ ನಡೆದಿದೆ.

ಮೃತ ಕಂಡಕ್ಟರ್ ನನ್ನು ಈರಯ್ಯ(23) ಎಂದು ಗುರುತಿಸಲಾಗಿದೆ.

ಮಂಗಳವಾರ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂದರ್ಭ ನಂತೂರು ವೃತ್ತದ ಬಳಿ ಬಸ್ಸಿನ ಎದುರಿನ ಬಾಗಿಲ ಬಳಿ ನಿಂತಿದ್ದ ಈರಯ್ಯ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಈರಯ್ಯನನ್ನುಆಟೋ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.