ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ

ಪಡುಬಿದ್ರೆ: ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ನಡೆಯಿತು.‌

ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಇವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಿತು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ ಗುರುರಾಜ್, ಕೇಶವ ಮೊಯ್ಲಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗ ಹಿರಿಯರಾದ ಗುಣಕರ ಶೆಟ್ಟಿ. ಮಹಾಶಕ್ತಿಕೇಂದ್ರ ಮಟ್ಟದ ಎಲ್ಲ ಪದಾಧಿಕಾರಿಗಳು ಜನಪ್ರತಿನಿಧಿಗಳು, ಕಾರ್ಯಕರ್ತರು ಮತದಾರರು ಉಪಸ್ಥಿತರಿದ್ದರು. ಮತ್ತಿತರರು ಉಪಸ್ಥಿತರಿದ್ದರು.