ಸೌಹಾರ್ದಯುತ ಬಕ್ರೀದ್ ಆಚರಣೆ: ಮುಂಜಾಗ್ರತಾ ಕ್ರಮ ವಹಿಸಲು ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದಿಂದ ಕಾಪು ಠಾಣೆಯಲ್ಲಿ ಮನವಿ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುಧ್ದೀನ್ ಶೇಖ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಹಮೀದ್ ಯೂಸುಫ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸ್ಯೆನ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ ವೇದಿಕೆಯ ಅಧ್ಯಕ್ಷ ರಾಜೇಶ್ ಮೆಂಡನ್, ಹಿಂದುಳಿದ ವರ್ಗದ ಅಧ್ಯಕ್ಷ ದೀಪಕ್ ಕುಮಾರ್, ಅಲ್ಪ ಸಂಖ್ಯಾತರ ಉಪಾಧ್ಯಕ್ಷ ನಸೀರ್ ಕಾಪು, ಮಜೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ರಾವ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುಲಕ್ಷನ್ ಪೂಜಾರಿ, ಕಾಂಗ್ರೆಸ್ ಮುಂಖಡರಾದ ಬಾಷು ಸಾಹೇಬ್, ಉಸ್ಮಾನ್ ಮಲ್ಲಾರ್, ಸಿರಾಜುದ್ದೀನ್, ಅಲ್ ರೆಹಾನ್ ಮಲ್ಲಾರ್ ಇನ್ನಿತರರು ಉಪಸ್ಥಿತರಿದ್ದರು.