ಸ್ವಂತ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು ಸಂಪರ್ಕಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಜೂನ್ 12: ಕೊರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉಳಿದಿರುವ ಹೊರ ರಾಜ್ಯಗಳ ವಲಸೆ ಕಾಮಿಕರನ್ನು ಈಗಾಗಲೇ ಅವರ ಸ್ವಂತ ಊರುಗಳಿಗೆ ಜಿಲ್ಲಾಡಳತದಿಂದ ಟ್ರೆನ್, ಬಸ್ಸು ಮೂಲಕ ಈಗಾಗಲೇ ಕಳುಹಿಸಿಕೊಡಲಾಗಿದೆ.

ಇನ್ನೂ ಕೂಡ ಜಿಲ್ಲೆಯಲ್ಲಿ ಹೊರ ರಾಜ್ಯದ ವಲಸೆ  ಕಾರ್ಮಿಕರು ಅವರ ಸ್ವಂತ ಊರಿಗೆ ಹೋಗಲು ಬಾಕಿಯಾಗಿದ್ದಲ್ಲಿ, ಅಂತಹ ವಲಸೆ ಕಾರ್ಮಿಕರು ಅವರ ಸ್ವಂತ ರಾಜ್ಯಕ್ಕೆ ಹೋಗಲು ಇಚ್ಛಿಸಿದ್ದಲ್ಲಿ , ದೂರವಾಣಿ ಸಂಖ್ಯೆ (0820-2571500) ಕರೆ ಮಾಡುವಂತೆ ಅಥವಾ ವ್ಯಾಟ್ಸಪ್ ನಂಬರ್ (98808 31516)ಗೆ ದಾಖಲೆಗಳನ್ನು ಕಳುಹಿಸಿ ನೊಂದಾವಣೆ ಮಾಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.