ಕೊರೊನ ವಿರುದ್ಧ ಒಗ್ಗಟ್ಟಿನ ಹೋರಾಟ: ಏ 5ರಂದು 9 ನಿಮಿಷ ಮೊಂಬತ್ತಿ ಉರಿಸಲು ಪ್ರಧಾನಿ ಕರೆ

ನವದೆಹಲಿ: ಇದೇ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ನಿಮ್ಮ ಅಮೂಲ್ಯ ಸಮಯವಾಗಿದ್ದು, ಭಾನುವಾರ ರಾತ್ರಿ 9 ಗಂಟೆಗೆ ಪ್ರತಿಯೊಬ್ಬ ಭಾರತೀಯ ಕೂಡ ಮನೆಯ ಲೈಟ್​ ಆರಿಸಿ, ಮೊಬೈಲ್​ ಟಾರ್ಚ್​ ಅಥವಾ ಮೇಣದ ಬತ್ತಿ ಹಿಡಿಯಬೇಕು. ಆ ಮೂಲಕ ಇಡೀ ವಿಶ್ವಕ್ಕೆ ಭಾರತದ ಬೆಳಕನ್ನು ತೋರಿಸಬೇಕು ಎಂದು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ.
ಮನೆಯ ಬಾಲ್ಕನಿಯಲ್ಲಿ ನಿಂತು ದೀಪ, ಮೇಣದಬತ್ತಿ, ಟಾರ್ಚ್​, ಮೊಬೈಲ್ ಫ್ಲಾಶ್ ಹಿಡಿದು ಭಾರತ ಮಾತೆಯನ್ನು ನೆನೆಯಿರಿ. ಯಾರೂ ಸಹ ರಸ್ತೆಗಿಳಿಯಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು.