ಕೋವಿಡ್-19: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಉಡುಪಿ ಏ.24: ಕೋವಿಡ್-19  ಸಂದರ್ಭದಲ್ಲಿ, ಸಾರ್ವಜನಿಕರಿಗೆ ಕೋವಿಡ್ 19 ಕುರಿತು ಸುದ್ದಿಗಳನ್ನು ತಲುಪಿಸುತ್ತಿರುವ  ಪತ್ರಕರ್ತರು, ಲಾಕ್‌ಡೌನ್ ಆರಂಭದಿಂದಲೂ ತಮಗಿರುವ ಅಪಾಯವನ್ನು ಲೆಕ್ಕಿಸದೇ, ಪ್ರತೀ ದಿನ ಸಾರ್ವಜನಿಕ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಆರೋಗ್ಯ ಸುರಕ್ಷತೆಯ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಪತ್ರಕರ್ತರಿಗೆ ಕೋವಿಡ್-19 ತಪಾಸಣೆಯನ್ನು ಶುಕ್ರವಾರ ನಡೆಸಲಾಯಿತು.

ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ತಪಾಸಣೆಯಲ್ಲಿ ಹಲವು ಪತ್ರಕರ್ತರು ಭಾಗವಹಿಸಿದ್ದು, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಮತ್ತು ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡಾ ಅವರ ನಿರ್ದೇಶನದಲ್ಲಿ,  ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ. ಚಂದ್ರಶೇಖರ ಅಡಿಗ ಅವರ ನೇತೃತ್ವದಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಕುಮಾರ್ ಸಹಕರಿಸಿದರು.

ಶನಿವಾರ ಸಹ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪತ್ರಕರ್ತರಿಗೆ ತಪಾಸಣೆ ನಡೆಯಲಿದೆ.