ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಂ.ಎಸ್ ಧೋನಿ: ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟಲ್ ಕೂಲ್ ಎಂ.ಎಸ್ ಧೋನಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಆ ಬಳಿಕ ಶಾಸಕ ಖಾದರ್ ಅವರ ಸಹೋದರ ಯು.ಟಿ ಇಫ್ತಿಕಾರ್ ಅವರ ಕಾರಿನಲ್ಲಿ ಕಾಸರಗೋಡಿನ ಬೇಕಲ್ ಗೆ ತೆರಳಿದ್ದಾರೆ.

Image

ಕಾಸರಗೋಡಿನಲ್ಲಿ ನಡೆಯಲಿರುವ ತಮ್ಮ ಸ್ನೇಹಿತ ಡಾ. ಶಾಜಿರ್ ಗಫಾರ್ ಅವರ ತಂದೆ ಪ್ರೊ.ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗವಹಿಸಲಿದ್ದಾರೆ.