ಮಕ್ಕಳಲ್ಲಿ ಧಾರ್ಮಿಕ‌ ಭಕ್ತಿ, ಶ್ರದ್ಧೆ ಬೆಳೆಸಿ ಸನ್ಮಾರ್ಗದಲ್ಲಿ ಮುನ್ನಡೆಸಿ: ವಿಧುಶೇಖರ ಭಾರತೀ ಸ್ವಾಮೀಜಿ

ಬ್ರಹ್ಮಾವರ: ಮಕ್ಕಳಲ್ಲಿ ಧಾರ್ಮಿಕ ಭಕ್ತಿ, ಶ್ರದ್ಧೆ ಬೆಳೆಸಿ, ಸನ್ಮಾರ್ಗದಲ್ಲಿ ಮುನ್ನಡೆಸಿ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಹೇಳಿದರು.

ಅವರು ಸೋಮವಾರ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನಕ್ಕೆ ಮಕ್ಕಿತೋಟ ಮನೆಯ ಗೌರಿ ವಿಟ್ಠಲ್ ಶೆಟ್ಟಿ ಮತ್ತು ಕುಟುಂಬಸ್ಥರು ನೀಡಿದ ನೂತನ ಬ್ರಹ್ಮರಥವನ್ನು ಲೋಕಾರ್ಪಣೆಗೊಳಿಸಿ ವಿಶೇಷ ರಥೋತ್ಸವದಲ್ಲಿ ಭಾಗವಹಿಸಿ ಅನುಗ್ರಹ ಸಂದೇಶ ನೀಡಿದರು.

ಶೃಂಗೇರಿ ಪೀಠದ ಆಡಳಿತಾಧಿಕಾರಿ ಡಾ| ಗೌರೀಶಂಕರ್, ಪ್ರಾಂತೀಯ ಅಧಿಕಾರಿಗಳಾದ ವಾಗೀಶ ಶಾಸ್ತ್ರಿ, ಲೋಕೇಶ ಅಡಿಗ, ನೀಲಾವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್ ರಘುರಾಮ ಮಧ್ಯಸ್ಥ, ಅರ್ಚಕರಾದ ಚಂದ್ರಶೇಖರ ಅಡಿಗ, ಕೃಷ್ಣ ಅಡಿಗ, ರಾಘವೇಂದ್ರ ಅಡಿಗ, ಮಕ್ಕಿತೋಟ ಮನೆಯ ಗೌರಿ ವಿಟ್ಠಲ ಶೆಟ್ಟಿ ಮತ್ತು ಕುಟುಂಬಸ್ಥರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.