ಶ್ರೀಕೃಷ್ಣಮಠದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ನೃತ್ಯ ವಿದುಷಿ ಮಂಜರಿಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಘಶ್ರೀ ಇವರಿಂದ ನೃತ್ಯಾಭಿವಂದನ ಅಂಗವಾಗಿ ಭರತನಾಟ್ಯ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ಕಲಾವಿದರಾದ ಕೋಟ ಭಗವತ್ ಭಜನಾ ತಂಡದಿಂದ ಕೋಲಾಟ ನೃತ್ಯ ಮತ್ತು ಉದಯಾಸ್ತಮಾನ ಭಜನಾ ಕಾರ್ಯಕ್ರಮಗಳು ನಡೆದವು.