ಪ್ರಾಣ ಪ್ರತಿಷ್ಠೆ ನಿಮಿತ್ತ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪುತ್ತಿಗೆಶ್ರೀ ಗಳಿಂದ ಚಾಲನೆ

ಉಡುಪಿ: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ ಮಂದಿರ ಲೋಕಾರ್ಪಣೆಯ ಸಂದರ್ಭದಲ್ಲಿ ರಾಮೋತ್ಸವದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ವಿವಿಧ ಭಜನಾ ತಂಡಗಳಿಂದ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳಾದ ಸುಶೀಂದ್ರ ತೀರ್ಥರು, ಯಶ್ ಪಾಲ್ ಸುವರ್ಣ ಹಾಗೂ ಗಣ್ಯರು ಉಪಸ್ಥಿತರಿದ್ದರು.