ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲೆಯ ನಾಗರಿಕರು ಪ್ರತೀ ಮನೆಯಲ್ಲೂ ಆಗಸ್ಟ್ 13 ರಿಂದ 15 ರ ವರೆಗೆ ತ್ರಿವರ್ಣ ಧ್ವಜವನ್ನು ಹಾರಿಸುವುದರೊಂದಿಗೆ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಭಿನಂದನೆ ಸಲ್ಲಿಸಿರುತ್ತಾರೆ. ಸಾರ್ವಜನಿಕರು ತಮ್ಮ ಮನೆಯಲ್ಲಿರುವ ರಾಷ್ಟ್ರಧ್ವಜವನ್ನು ಗೌರವಯುತವಾಗಿ ಸಂರಕ್ಷಣೆ ಮಾಡುವುದರೊಂದಿಗೆ ಧ್ವಜ ಸಂಹಿತೆಯನ್ನು ಕಾಪಾಡಬೇಕೆಂದು ತಿಳಿಸಿದ್ದಾರೆ.