ಕುಂದಾಪುರ: ಡಿ. 17 ರಂದು ಹಾರ್ದಳ್ಳಿ ಮಂಡಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

ಕುಂದಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಪ್ರೌಢಶಾಲಾ ವಿಭಾಗ) ಗ್ರಾಮ ವಾಸ್ತವ್ಯ ಮಾಡಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಸಲ್ಲಿಸುವಂತೆ ಹಾಗೂ ಗ್ರಾಮಸ್ಥರು ಭಾಗವಹಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.