ಸಾಧಕರ ಕುರ್ಚಿ ಏರಿದ ಡಿಸಿಎಂ ಡಿಕೆಶಿ:ವೀಕೆಂಡ್​ ವಿತ್​ ರಮೇಶ್

ವೀಕೆಂಡ್​ ವಿತ್​ ರಮೇಶ್​’ ಅಪಾರ ಸಂಖ್ಯೆಯ ವೀಕ್ಷಕರನ್ನು ಸಂಪಾದಿಸಿರುವ ಕನ್ನಡದ ಜನಪ್ರಿಯ ಕಾರ್ಯಕ್ರಮ.ಅಂತಿಮ ಘಟ್ಟ ತಲುಪಿರುವ ವೀಕೆಂಡ್​ ವಿತ್​ ರಮೇಶ್​ ಶೋನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಆಗಮಿಸಲಿದ್ದಾರೆ

ಕನ್ನಡಿಗರ ಮನೆಗೆದ್ದಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ಬಂದು ತಮ್ಮ ಸಾಧನೆಯ ಪುಟಗಳನ್ನು ಪ್ರೇಕ್ಷಕರ ಮುಂದೆ ತೆರೆದಿಡುತ್ತಾರೆ.

‘ವೀಕೆಂಡ್​ ವಿತ್​ ರಮೇಶ್​’ ಶೋನ ಈ ವಾರದ ಪ್ರೋಮೋ ರಿಲೀಸ್​ ಆಗಿದೆ. ಸೋಷಿಯಲ್​ ಮೀಡಿಯಾಗಳಲ್ಲೂ ಪ್ರೋಮೋ ರಿಲೀಸ್​ ಮಾಡಿರುವ ಜೀ ವಾಹಿನಿ, ”ರಾಜ್ಯ ಕಂಡ ಪ್ರಚಂಡ ರಾಜಕಾರಣಿ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಬದುಕಿನ ಜರ್ನಿ ಅನಾವರಣ! ವೀಕೆಂಡ್ ವಿತ್ ರಮೇಶ್ 5 ಗ್ರ್ಯಾಂಡ್​ ಫಿನಾಲೆ ಶನಿವಾರ ಮತ್ತು ಭಾನುವಾರ ರಾತ್ರಿ ‌9ಕ್ಕೆ” ಎಂದು ಬರೆದುಕೊಂಡಿದೆ.

ಶಿವಕುಮಾರ್​ ಅವ್ರು ಒಳ್ಳೆಯ ಆಡಳಿತಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಣಗಾನ ಮಾಡಿರೋದು ಜನರ ಗಮನ ಸೆಳೆಯುತ್ತಿದೆ.
‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5 ಕೊನೆಯ ಹಂತ ತಲುಪಿದ್ದು, ಅಂತಿಮ ವಾರ ಯಾರು ಬರಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಈ ವಾರ ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಸಾಧಕರ ಕುರ್ಚಿ ಏರಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆಶಿ ಅವರ ಕಾರ್ಯಕ್ರಮ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.