ಸರ್ವಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ: ಸಿಎಂ

ಬೀದರ್: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದರೆ, ಜನರು ಸಹಕಾರ ನೀಡದಿದ್ದರೆ ಲಾಕ್​ಡೌನ್ ಮಾಡುವುದು ಅನಿವಾರ್ಯವಾಗುತ್ತೆ. ಹಾಗಾಗಿ ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್​ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬೀದರ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್​ಡೌನ್ ಮಾಡಿದರೆ ಜನರಿಗೆ ತೊಂದರೆ ಆಗುತ್ತೆ. ಲಾಕ್​ಡೌನ್​ನಿಂದ ತೊಂದರೆ ಬಗ್ಗೆ ಸರ್ಕಾರಕ್ಕೂ ಗೊತ್ತಿದೆ. ಆದರೆ ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ, ವಿಪಕ್ಷದವರು ಯಾವುದೇ ಸಲಹೆ ನೀಡಿದರೂ ಸ್ವೀಕರಿಸ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.