1 ಕೋಟಿ ವೆಚ್ಚದಲ್ಲಿ ಕೊಡವೂರು ಶ್ರೀ ಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿ; ಶಾಸಕರಿಂದ ಭೂಮಿ ಪೂಜೆ

ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ವಾರ್ಡಿನ ಕೊಡವೂರು ಶ್ರೀ ಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿಗೆ ಶಾಸಕರಾದ ಶ್ರೀ. ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ 1.00 ಕೋಟಿ ರೂ ಅನುದಾನ ಮಂಜೂರಾಗಿದೆ. ಶಾಸಕ ಕೆ. ರಘುಪತಿ ಭಟ್ ಅವರು ಇಂದು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ನಗರ ಸಭಾ ಸದಸ್ಯರಾದ ಸುಂದರ್ ಕಲ್ಮಾಡಿ, ಕೆ.ಎಂ.ಎಫ್ ಮಾಜಿ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.