ದೊಡ್ಮನೆ ಕುಟುಂಬದ ಯುವ ನಟ ಸೂರಜ್​ಗೆ ಅಪಘಾತ

ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು ನಂಜನಗೂಡು ರಸ್ತೆಯಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ವರನಟ ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್​ಗೆ ಅಪಘಾತ ಆಗಿದೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್​​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೂರಜ್​ ನೋಡಲು ಈಗಾಗಲೇ ಶಿವರಾಜ್ ಕುಮಾರ್ ನಿರ್ಮಾಪಕ ಚಿನ್ನೆಗೌಡ ಅವರು ಮೈಸೂರಿಗೆ ಹೋಗಿದ್ದಾರೆ. ಸೂರಜ್​ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಚಿತ್ರದಲ್ಲಿ ನಟಿಸಿದ್ದರು.
ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಸೂರಜ್​​​ ಬಲ​ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಸೂರಜ್​ ಬಲಗಾಲಿಗೆ ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ ತೆಗೆದಿದ್ದಾರೆ.