ಅಕ್ರಮ ಮತದಾನ ಅರ್ಜಿ ವಜಾ: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಉಪಚುನಾವಣೆ ಹಾದಿ ಸುಗಮ

ಕಲಬುರಗಿ: 2018ರ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಬಂದಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸದ್ಯ ಅನರ್ಹಗೊಂಡಿರುವ ಪ್ರತಾಪ್ ಗೌಡ ಪಾಟೀಲ್ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪ್ರತಾಪ್ ಅಕ್ರಮ ಮತದಾನ ಮೂಲಕ ಗೆಲುವು ಸಾಧಿಸಿದ್ದಾರೆಂದು ಆರೋಪಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ನ್ಯಾಯಾಲಯ ಮೆಟ್ಟಿಲು ಏರಿದ್ದರು.

ಆದರೆ ಬಸನಗೌಡ ಸೂಕ್ತ ದಾಖಲೆಗಳನ್ನು ಸಲ್ಲಿಸದ ಕಾರಣ ಅವರ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಇದರೊಂದಿಗೆ ಪಾಟೀಲ್ ಅವರಿಗೆ ಮಸ್ಕಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಅಡ್ಡಿ ದೂರಾಗಿದೆ.