ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಇಂದು ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹಾಗೂ ಸಮಾಜ ಸೇವಕ, ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಉಪಾಧ್ಯಕ್ಷರಾದ ದಿನೇಶ್ ಎರ್ಮಾಳು, ಲೀಲಾ. ಆರ್. ಅಮೀನ್, ಕೋಶಾಧಿಕಾರಿ ಗಣೇಶ್ ಕುಮಾರ್ ಸಂಪಿಗೆನಗರ, ಕಾರ್ಯದರ್ಶಿ ಹರೀಶ್ ಸಾಲಿಯಾನ್, ಸದಸ್ಯರಾದ ಶ್ರೀಧರ ಅಮೀನ್ ಮಣಿಪುರ, ಕೃಷ್ಣ ಕುಲಾಲ್ ವರ್ವಾಡಿ, ಸತೀಶ್ ಪೂಜಾರಿ ಕುಕ್ಕಿಕಟ್ಟೆ ಉಪಸ್ಥಿತರಿದ್ದರು.