ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ₹3.65 ಕೋಟಿ ಮೌಲ್ಯದ ವಿವಿಧ ಸವಲತ್ತುಗಳ ವಿತರಣೆ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಇದರ ವತಿಯಿಂದ ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ಆಯೋಜಿಸಿದ್ದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸದಸ್ಯ ಸಹಕಾರಿ ಸಂಘ ಹಾಗೂ ಗ್ರಾಹಕ ಬೋಟ್ ಮಾಲಕರಿಗೆ 2.33 ಕೋಟಿ ಮೌಲ್ಯದ ಪ್ರೋತ್ಸಾಹಕ ಉಡುಗೊರೆ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿದ್ದು, ಸಮಾರಂಭವನ್ನು ನಾಡೋಜ ಡಾ. ಜಿ ಶಂಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗಿನ್ನಿಸ್ ದಾಖಲೆಯ ವೀರ ಈಜುಪಟು ಗಂಗಾಧರ್ ಜಿ. ಕಡೆಕಾರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬನ್ನಂಜೆ ಬಾಬು ಅಮೀನ್ ಅವರನ್ನು ಸಮ್ಮಾನಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ. ಸಿ. ಕೋಟ್ಯಾನ್, ಕಾರ್ತಿಕ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹರಿಯಪ್ಪ ಕೋಟ್ಯಾನ್, ಉಡುಪಿ ಜಿಲ್ಲಾ   ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಎಸ್. ಕೆ., ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ರಾಜೇಂದ್ರ ಹಿರಿಯಡ್ಕ, ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗುಂಡು ಬಿ. ಅಮೀನ್, ನಗರಸಭಾ ಸದಸ್ಯ ವಿಜಯ ಕುಂದರ್, ವಿವಿಧ ಮೀನುಗಾರ ಸಂಘಟನೆಯ ಅಧ್ಯಕ್ಷರುಗಳಾದ ಸಾಧು ಸಾಲ್ಯಾನ್, ನಾಗರಾಜ್ ಸುವರ್ಣ, ಸುಭಾಶ್ ಮೆಂಡನ್, ದಯಾಕರ್ ವಿ. ಸುವರ್ಣ, ರವಿರಾಜ್ ಸುವರ್ಣ, ಮೋಹನ್ ಕುಂದರ್, ಗಣೇಶ್ ಸುವರ್ಣ, ಜಲಜ ಕೋಟ್ಯಾನ್, ಬೇಬಿ ಸಾಲ್ಯಾನ್, ಫೆಡರೇಶನ್‌ನ ಉಪಾಧ್ಯಕ್ಷ ಪುರುಷೋತ್ತಮ ಅಮೀನ್, ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್‌‌ ಮೊದಲಾದವರು ಉಪಸ್ಥಿತರಿದ್ದರು.