ಕರಾವಳಿ ಕರ್ನಾಟಕದಲ್ಲಿ ಅತ್ಯಾಧಿಕ ಮಳೆ ಮುನ್ಸೂಚನೆ: ರೈತರು ಮತ್ತು ಮೀನುಗಾರರಿಗೆ ಮುನ್ನೆಚ್ಚರಿಕೆಗಳು

ಉಡುಪಿ/ಮಂಗಳೂರು: ಮುಂದಿನ 48 ರಿಂದ 72 ಗಂಟೆಗಳ ಅವಧಿಯಲ್ಲಿ ಕರ್ನಾಟಕದ, ವಿಶೇಷವಾಗಿ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಅಧಿಕದಿಂದ ಅತ್ಯಾಧಿಕ ಮಳೆಯಾಗುವ ಸಾಧ್ಯತೆ ಇದ್ದು, ರೈತರಿಗೆ ಮತ್ತು ಮೀನುಗಾರರಿಗೆ ಮುನ್ನೆಚ್ಚರಿಕೆಗಳನ್ನು ನೀಡಲಾಗಿದೆ.

 ರೈತರು ಮುಂದಿನ 2-3 ದಿನಗಳವರೆಗೆ ಎಲ್ಲಾ ಕೃಷಿ ಚಟುವಟಿಕೆಗಳನ್ನು ಮುಂದೂಡಬಹುದು
(ಬಿತ್ತನೆ, ಸಿಂಪಡಣೆ, ರಸಗೊಬ್ಬರ ಬಳಕೆ ಮತ್ತು ಕೊಯ್ಲು)
 ರೈತರು ಭತ್ತದ ನಾಟಿಯನ್ನು ಮುಂದೂಡಬಹುದು
 ಮೀನುಗಾರರು ಸಮುದ್ರ ತೀರದಿಂದ ದೂರ ಇರುವಂತೆ ಸೂಚಿಸಲಾಗಿದೆ
 ಅಡಿಕೆ ತೋಟಗಳಲ್ಲಿ ರೈತರು ನೀರು ಹರಿಯಲು ಅಗತ್ಯವಾದ ಒಳಚರಂಡಿ ಸೌಲಭ್ಯವನ್ನು ಮಾಡಬಹುದು
(ಕೊಳೆರೋಗವನ್ನು ತಪ್ಪಿಸಲು)
 ಬೆಳೆ ಸಲಹೆಗಳು ಮತ್ತು ಮಳೆಯ ಮುನ್ಸೂಚನೆಗಾಗಿ ಸಾರ್ವಜನಿಕರು ಮೇಘದೂತ್ ಅಪ್ಲಿಕೇಶನ್ ಅನ್ನು ಬಳಸಬಹುದು
ಸಿಡಿಲಿನ ಮುನ್ಸೂಚನೆಗಾಗಿ ದಾಮಿನಿ ಅಪ್ಲಿಕೇಶನ್ ಬಳಸಬಹುದು