ದ.ಕ.ಜಿಲ್ಲೆ: ಮತ್ತೊಬ್ಬ ಶಾಸಕರಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದ.ಕ. ಜಿಲ್ಲೆಯ ಶಾಸಕರಾದ ಹರೀಶ್ ಪೂಂಜಾ ಹಾಗೂ ಭರತ್ ಶೆಟ್ಟಿ ಅವರ ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಅವರಿಗೂ ಕೊರೊನಾ ವಕ್ಕರಿಸಿದೆ.
ಬೆಂಗಳೂರಿಗೆ ತೆರಳಿದ್ದ ಶಾಸಕರು ಸುಳ್ಯಕ್ಕೆ ಆಗಮಿಸಿದ ಬಳಿಕ ತಲೆಕಾಣಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯದ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ಶಾಸಕರು ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.
ಅಂಗಾರ ಅವರ ಕಾರಿನ ಚಾಲಕನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.