ದ.ಕ. ಜಿಲ್ಲೆ: ಮಹಾಮಾರಿ ಕೊರೊನಾಗೆ ನಾಲ್ಕನೇ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾಗೆ 4 ನೇ ಬಲಿಯಾಗಿದೆ.
ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಬುಧವಾರ ಕೊರೋನಾಗೆ ಬಲಿಯಾಗಿದ್ದಾರೆ‌.
ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಳುತ್ತಿದ್ದ ಅವರಿಗೆ ಎಪ್ರಿಲ್ 30 ರಂದು ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
ಅವರಿಗೆ ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೊನಾ ಪಾಸಿಟಿವ್ ನಂತರ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ದ.ಕ‌ ಜಿಲ್ಲೆಯಲ್ಲಿ ಈ ಹಿಂದೆ ಬಂಟ್ವಾಳದ ಮೂವರು ಸೋಂಕಿತರು ಬಲಿಯಾಗಿದ್ದರು. ಇದೀಗ ನಾಲ್ಕನೇಯ ಬಲಿಯಾಗಿದೆ.