3 ರಂದು ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾಆದಿಶಕ್ತಿ ಕ್ಷೇತ್ರದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜೂನ್ 3 ಶನಿವಾರದಂದು ಹುಣ್ಣಿಮೆಯ ಪರ್ವಕಾಲದಲ್ಲಿ ಶ್ರೀಚಕ್ರ ಪೀಠ ಸುರಪೂಜಿತೆಗೆ ಏಕಕಾಲ ಶ್ರೀಚಕ್ರ ಮಂಡಲ ಪೂಜೆ ಸಂಪನ್ನಗೊಳ್ಳಲಿದೆ.

ಭಾರತದ ಹೆಸರಾಂತ ಜಿಮ್ ಟ್ರೈನರ್ ವಿನೋದ್ ಜನ್ನ ಮತ್ತು ಮನೆಯವರ ವತಿಯಿಂದ ಈ ಮಹಾನ್ ಪೂಜೆ ಪ್ರಾಯಶ್ಚಿತ್ತ ಪೂರಕವಾಗಿ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಸಂಪನ್ನಗೊಳ್ಳಲಿರುವುದು.
ಪ್ರಾತ:ಕಾಲದಿಂದ ಶ್ರೀಚಕ್ರ ಮಂಡಲ ರಚನೆ ಆರಂಭಗೊಳ್ಳಲಿದ್ದು,
ಸಂಜೆ ಗಂಟೆ 5 ರಿಂದ ಪೂಜೆ ಆರಂಭಗೊಳ್ಳಲಿದೆ. ಪೂಜೆ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ, ಕನ್ನಿಕರಾಧನೆ, ಬ್ರಾಹ್ಮಣರಾಧನೆ, ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ವಿತರಣೆಯಾಗಲಿದೆ.
ಏಕಕಾಲದಲ್ಲಿ ಭೋಗವನ್ನು ಮೋಕ್ಷವನ್ನು ಕರುಣಿಸುವ ಬಹು ಫಲಪ್ರದವಾದ ಈ ಮಹಾನ್ ಪೂಜೆಯಲ್ಲಿ ಭಕ್ತರುಗಳು ಪಾಲ್ಗೊಳ್ಳಬಹುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.