ಬೈಂದೂರು: ಬಾವಿಗೆ ಬಿದ್ದು ವೃದ್ಧೆ ಸಾವು

ಬೈಂದೂರು: ಬಾವಿಯಲ್ಲಿ‌ ನೀರು ತೆಗೆಯುತ್ತಿರುವಾಗ ಆಯತಪ್ಪಿ ಬಾವಿಯೊಳಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಪಡುವರಿ ಗ್ರಾಮದಲ್ಲಿ ಎ. 29 ರಂದು ಮಧ್ಯಾಹ್ನ ನಡೆದಿದೆ.

ಪಡುವರಿ ಗ್ರಾಮದ ನಿವಾಸಿ, 75 ವರ್ಷದ ಇಮಿಲಿಯಾ ನಜ್ರೇತ್ ಮೃತ ದುರ್ದೈವಿ. ಇವರು ನಿನ್ನೆ ಮಧ್ಯಾಹ್ನ ಮನೆಯ ಬಾವಿಯಿಂದ ನೀರನ್ನು ಸೇದುತ್ತಿದ್ದರು. ಈ ವೇಳೆ ಆಯತಪ್ಪಿ ಬಾವಿಯ ನೀರಿಗೆ ಬಿದ್ದಿದ್ದು, ಕೂಡಲೇ ಅವರನ್ನು ಪ್ರದೀಪ್ ಎಂಬವರು ಮೇಲಕ್ಕೆ ಎತ್ತಿದ್ದರು. ತಕ್ಷಣವೇ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಇಮಿಲಿಯಾ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.