ಕೊಡಂಕೂರು ಬಳಿ ಕೀಟನಾಶಕ ಸೇವಿಸಿ ವೃದ್ಧ ಆತ್ಮಹತ್ಯೆ

ಉಡುಪಿ: ಕೀಟನಾಶಕ ಸೇವಿಸಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಿಟ್ಟೂರಿನ  ಕೊಡಂಕೂರು ಎಂಬಲ್ಲಿ ನಡೆದಿದೆ.

ಕೊಡಂಕೂರು ನಿವಾಸಿ 74 ವರ್ಷದ ಉದಯ ರಾವ್ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.8 ರಂದು ಮನೆಯ ಬಾತ್ ರೂಮ್ ನಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ  ಫಲಕಾರಿಯಾಗದೇ ಉದಯ ಅವರು ಮಾ.17 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.