ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಆಯೋಜನೆ; ಆಯೋಜಕರಿಗೆ ಚುನಾವಣಾ ಆಯೋಗ ನೋಟಿಸ್

ಮಂಗಳೂರು: ಮಡಿಪು ಜಂಕ್ಷನ್ ರಸ್ತೆಯಲ್ಲಿ ಇಫ್ತಾರ್ ಕೂಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಯೋಜಕರ ವಿರುದ್ದ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮಾರ್ಚ್ 29 ರಂದು ಮುಡಿಪು ಜಂಕ್ಷನ್ ನಲ್ಲಿ ಅಬೂಬಕ್ಕರ್ ಸಿದ್ಧೀಕ್ ಎಂಬುವರು ಸಾರ್ವಜನಿಕ ರಸ್ತೆಯ ಮಧ್ಯದಲ್ಲೇ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಚುನಾವಣಾ ಆಯೋಗ, ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ಅಬೂಬಕ್ಕರ್ ಸಿದ್ಧೀಕ್ ಎಂಬವರಿಗೆ ನೋಟೀಸ್ ಜಾರಿ ಮಾಡಿದೆ. ಕಾರ್ಯಕ್ರಮ ಆಯೋಜನೆಗೆ ಮೊದಲು ಅನುಮತಿ ಪತ್ರ ನೀಡಲಾಗಿದ್ದು, ಅನುಮತಿ ಪತ್ರದ ಷರತ್ತು ಉಲ್ಲಂಘಿಸಿ ಕಾರ್ಯಕ್ರಮದ ಆಯೋಜನೆ ಮಾಡಲಾಗಿದ್ದು, ರಸ್ತೆ ತಡೆ ಒಡ್ಡಿ ಇಫ್ತಾರ್ ಕೂಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿರುವ ಕಾರಣ ಏಕೆ ಕ್ರಮ ಜರುಗಿಸಬಾರದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.