ಮಂಗಳೂರು: ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಸಿಡಾಕ್ ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿಯ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಆಗಸ್ಟ್ 26 ರಿಂದ ಮಂಗಳೂರಿನ ಸಿ.ಒ.ಡಿ.ಪಿ ಸಭಾಂಗಣದಲ್ಲಿ 6 ದಿನಗಳ ಉಚಿತ ಊಟೋಪಚಾರ ಸಹಿತ ಉದ್ಯೋಗ ಆಭಿವೃದ್ಧಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಉಳಿದ ಪರಿಶಿಷ್ಟ ಜಾತಿಯ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, ಸರಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳ ವಿವಿಧ ಯೋಜನೆಗಳು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ವಿವಿಧ ಕ್ಷೇತ್ರಗಳಲ್ಲಿರುವ ಅವಕಾಶಗಳು, ಜಿ.ಎಸ್.ಟಿ., ಯೋಜನಾ ವರದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಇತ್ಯಾದಿ ವಿಚಾರಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಕೈಗಾರಿಕಾ ವಸಾಹತು, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9483120937/ 9844700937 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ