ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಹಾಯಧನ ಜುಲೈ 15 ರ ವರೆಗೆ ವಿಸ್ತರಣೆ

ಉಡುಪಿ ಜೂನ್ 4:  ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ  ಮಂಡಳಿ ವತಿಯಿಂದ ನೀಡಲಾಗುವ ವಿವಿಧ ಸಹಾಯಧನ/ಪ್ರೋತ್ಸಾಹಧನ  ಪಡೆಯಲು ನಿಗದಿಗೊಳಿಸಿದ್ದ ಕೊನೆಯ ದಿನಾಂಕವನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದ್ದು, ಕಾರ್ಮಿಕರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.