ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಫೆ. 23 ರಂದು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಿವೇದಿತಾ ಪ್ರೌಢಶಾಲೆಯ ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಪೂರ್ವಿ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲೆ ರಾಗಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕಿ ಚೈತ್ರ ಪೂಜಾರಿ ಸ್ವಾಗತಿಸಿದರು, ಉಪನ್ಯಾಸಕಿ ನಿಧಿ ವಂದಿಸಿದರು, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು