ಕರ್ತವ್ಯಪಥದಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಸುಪ್ರದಾ ಇವರಿಗೆ ಅಭಿನಂದನೆ

ಉಡುಪಿ : ರಂಗಭೂಮಿ ಉಡುಪಿ ಇದರ ರಂಗಭೂಮಿ ರಂಗೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ, ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ತಂಡದೊಂದಿಗೆ ಭಾಗವಹಿಸಿ ಭರತನಾಟ್ಯ ಪ್ರದರ್ಶನವನ್ನು ನೀಡಿ ಮೆಚ್ಚುಗೆಗಳಿಸಿದ ವಸುಪ್ರದಾ ಇವರನ್ನು ಉಡುಪಿ ಸಮಸ್ತ ನಾಗರಿಕ ಪರವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ನಾಡೋಜ ಜಿ.ಶಂಕರ್, ಎಚ್.ಎಸ್.ಬಲ್ಲಾಳ್,ತ ಲ್ಲೂರು ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.