ಬನ್ನಂಜೆ ಗಾಂಧಿ ಭವನದಿಂದ ಕಡತ ಕಳ್ಳತನ: ಪ್ರಕರಣ ದಾಖಲು

ಉಡುಪಿ: ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ ಒಳಪಟ್ಟಿರುವ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿಟ್ಟಿದ್ದ ದಾಖಲೆಗಳು ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಧಿ ಭವನದಲ್ಲಿ ತಾಲೂಕು ಕಚೇರಿಯ ದಾಖಲೆಗಳನ್ನು ಹಿಂದಿನಿಂದಲೂ ಶೇಖರಿಸಿಡಲಾಗುತಿತ್ತು. ಆ.15 ರಿಂದ ಸೆ.26 ರ ನಡುವೆ ಗಾಂಧಿ ಭವನದ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಉಡುಪಿ ತಾಲೂಕು ಕಛೇರಿಯ ಪ್ರಥಮ ದರ್ಜೆ ಸಹಾಯಕ ನಟರಾಜ್ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.