ಕಾರ್ಕಳ: ಹೊಟೇಲ್‌ ಕಟ್ಟಡದಲ್ಲಿ ಅಗ್ನಿ ಅವಘಡ; 1.20 ಲಕ್ಷ ರೂ ನಷ್ಟ

ಕಾರ್ಕಳ: ಕಸಬಾ ಗ್ರಾಮದ ಕರಿಯಕಲ್ಲು ಜಂಕ್ಷನ್‌ ಬಳಿ ನಿರ್ಮಲ ರಾವ್‌ ಮಾಲಕತ್ವದ ಹೊಟೇಲ್‌ ಕಟ್ಟಡಕ್ಕೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಮಾ.3ರಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ.

ಘಟನೆಯಿಂದ ಫ್ರಿಡ್ಜ್, ಗ್ರೈಂಡರ್, ಮಿಕ್ಸಿ, ಅಡುಗೆ ಪಾತ್ರೆ, ದಿನಸಿ ಸಾಮಗ್ರಿ, ವಿದ್ಯುತ್‌ ಸಂಪರ್ಕ ಇತ್ಯಾದಿ ಸುಟ್ಟು ಹೋಗಿವೆ. ಕಟ್ಟಡದ ಮೇಲ್ಛಾವಣಿ ಭಾಗಶಃ ಸುಟ್ಟು ಹೋಗಿದೆ.

ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಸುಮಾರು 1.20 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ.