ಮೀನುಗಾರಿಕಾ ಸಹಕಾರ ಸಂಘಗಳ ಆಡಳಿತ ನಿರ್ವಹಣಾ ತರಬೇತಿ ಶಿಬಿರ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ, ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ, ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣಾ ತರಬೇತಿ ಶಿಬಿರವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.

ಮೀನುಗಾರಿಕೆ ಇಲಾಖೆ ಉಪನಿರ್ದೇಶಕಿ ಅಂಜನಾದೇವಿ ಇಲಾಖೆ ವತಿಯಿಂದ ಸದಸ್ಯರಿಗಾಗಿ ಲಭ್ಯವಿರುವ ವಿವಿಧ ಸಾಲ ಸೌಲಭ್ಯ , ವಾಹನ ಸಾಲ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಬ್ಸಿಡಿ ಸಾಲ ಸೌಲಭ್ಯ, ವಸತಿ ಯೋಜನೆ, ಮತ್ಸ್ಯ ಆಶ್ರಯ ಯೋಜನೆ, ಅಪಘಾತ ವಿಮೆ ಸೌಲಭ್ಯ ಇವುಗಳ ಬಗ್ಗೆ ಮಾಹಿತಿ ನೀಡಿದರು.

ಸಹಕಾರ ಸಂಘಗಳ ಉಪನಿಬಂಧಕ ಕಚೇರಿ ಅಧೀಕ್ಷಕ ಗೋಪಾಲ್ ಮಂಗಳೂರು ಮಾತನಾಡಿ ಸಹಕಾರ ಸಂಘಗಳ ಇತ್ತೀಚಿನ ಕಾಯ್ದೆ ತಿದ್ದುಪಡಿ, ಆಡಳಿತ ಮಂಡಳಿಯ ಸದಸ್ಯರ ಅಧಿಕಾರ, ಚುನಾವಣೆಯ ಸಮಯದಲ್ಲಿ ಮುಖ್ಯ ಕಾರ್ಯನಿರ್ವಾಹಕರ ಕರ್ತವ್ಯ, ಜವಾಬ್ಧಾರಿ ನಿರ್ವಹಣೆ ಕುರಿತು ತಿಳಿಸಿದರು.

ಜಿಲ್ಲಾ ಯೂನಿಯನ್ ಉಪಾಧ್ಯಕ್ಷ ಅಶೋಕ ಕುಮಾರ್ ಬಲ್ಲಾಳ, ನಿರ್ದೇಶಕ ಸುರೇಶ ರಾವ್, ಕೊರಗ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ, ಸಹಕಾರ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಮೀನುಗಾರರ ಸಹಕಾರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.