ಮಲ್ಪೆಯಲ್ಲಿ ಮೀನುಗಾರಿಕೆ ಇಲಾಖಾ ಅಧಿಕಾರಿಗಳ ಸಭೆ: ಶಾಸಕ ಯಶ್ ಪಾಲ್ ಭಾಗಿ

ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಇಂದು‌ ಶಾಸಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು.

ಸಭೆಯಲ್ಲಿ ಮುಂದಿನ ಮೀನುಗಾರಿಕಾ ಋತುವಿನ ಚಟುವಟಿಕೆಗೆ ಪೂರಕವಾಗಿ ಪಾಸ್ ಬುಕ್ ನವೀಕರಣ, ಬಂದರು ಸ್ವಚ್ಚತೆ, ಭದ್ರತೆ ಹಾಗೂ ಸುವ್ಯಸ್ಥಿತ ನಿರ್ವಹಣೆಗೆ ಸ್ಥಳೀಯ ಮೀನುಗಾರ ಸಂಘಟನೆಗಳಿಗೆ ನೀಡುವ ಬಗ್ಗೆ ಮಾರ್ಗಸೂಚಿ ತಯಾರಿಕೆ ಹಾಗೂ ಮೀನುಗಾರಿಕಾ ಚಟುವಟಿಕೆಗೆ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಬಂದರು ಇಲಾಖೆಯ ಅಭಿಯಂತರಾದ ಶ್ರೀನಿವಾಸ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.