ನೆರೆ ಹಾನಿ: ಬಂಟ್ವಾಳಕ್ಕೆ 30 ಕೋ.ರೂ. ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ

ಬಂಟ್ವಾಳ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಬಂಟ್ವಾಳಕ್ಕೆ ಭೇಟಿ ನೀಡಿ ಪ್ರವಾಹ ಮತ್ತು ಪ್ರಾಕೃತಿಕ ವಿಕೋಪದಿಂದ ಆಗಿರುವ ಹಾನಿಯ ಬಗ್ಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಮಾಹಿತಿಯನ್ನು ಪಡೆದುಕೊಂಡರು.
ತಾಲೂಕಿನ ವಿವಿಧ ಭಾಗದಲ್ಲಿ ಹಾನಿಯಾಗಿರುವ ಬಗ್ಗೆ ಮುಖ್ಯಮಂತ್ರಿ ದಾಖಲೆಗಳನ್ನು ಸಲ್ಲಿಸಿ ಅಂದಾಜು 30 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಕಾರಾತ್ಮಕವಾಗಿ ಸ್ಪಂಧಿಸಿದ ಮುಖ್ಯಮಂತ್ರಿಗಳು ಇತರ ಜಿಲ್ಲೆಗಳಿಗೆ ನೀಡಲಾಗುವ ಪರಿಹಾರದಂತೆ ಈ ಜಿಲ್ಲೆಗೂ ಕ್ಷೇತ್ರಕ್ಕೂ ನೀಡುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಯವರು ಆಗಮಿಸುವ ಸುದ್ಧಿ ತಿಳಿದು ಬಂಟ್ವಾಳ ಬೈಪಾಸ್ ಜಂಕ್ಷನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.