ಮರಿಗಾಗಿ ಕ್ಷೇತ್ರ ತ್ಯಜಿಸಿದ ರಾಜಾಹುಲಿ: ಪುತ್ರ ವಿಜಯೇಂದ್ರನಿಗಾಗಿ ಶಿಕಾರಿಪುರ ಬಿಟ್ಟುಕೊಟ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ಯಡಿಯೂರಪ್ಪನವರ ಚುನಾವಣಾ ಕ್ಷೇತ್ರವಾದ ಶಿಕಾರಿಪುರವನ್ನು ತನ್ನ ಮಗ ಬಿ.ವೈ ವಿಜಯೇಂದ್ರನಿಗಾಗಿ ಬಿಟ್ಟು ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನು ಮುಂದೆ ಈ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಅಖಾಡಕ್ಕಿಳಿಯಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ ಈ ಘೋಷಣೆ ಮಾಡಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಹಳೆ ಮೈಸೂರು ಭಾಗದಲ್ಲಿ ಬೆಂಬಲವಿದ್ದರೂ,  ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಾದ್ದರಿಂದ ಕ್ಷೇತವನ್ನು ಬಿಟ್ಟುಕೊಟ್ಟಿದ್ದೇನೆ ಎಂದಿದ್ದಾರೆ. ಮಗನನ್ನು ತನಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವಂತೆ ಬಿ.ಎಸ್.ವೈ ಮನವಿ ಮಾಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಸರತ್ತು ನಡೆಯುತ್ತಿದ್ದು, ಕರ್ನಾಟಕದ ಮಾಸ್ ಲೀಡರ್, ರಾಜಾ ಹುಲಿ ಖ್ಯಾತಿಯ ಬಿ.ಎಸ್.ವೈ ತಮ್ಮ ನೆಚ್ಚಿನ ಕ್ಷೇತ್ರವನ್ನು ಪುತ್ರನ ಭವಿಷ್ಯಕ್ಕಾಗಿ ಬಿಟ್ಟುಕೊಟ್ಟು ಮೊದಲನೆ ದಾಳ ಎಸೆದಿದ್ದಾರೆ.

ಸುದ್ದಿ ಮೂಲ: ಕನ್ನಡ ಮೀಡಿಯಂ 24*7