ಸತತ ಐದನೇ ಬಾರಿ ಗೆಲುವು ದಾಖಲಿಸಿದ ಯುಟಿ ಖಾದರ್

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಯುಟಿ ಖಾದರ್ ಮಂಗಳೂರು ಕ್ಷೇತ್ರದಲ್ಲಿ 82,637 ಮತಗಳನ್ನು ಪಡೆಯುವ ಮೂಲಕ ಸತತ ಐದನೇ ಗೆಲುವು ದಾಖಲಿಸಿದ್ದಾರೆ.

ಎನ್.ಐ.ಟಿ.ಕೆನಲ್ಲಿ ಮತ ಎಣಿಕೆ ಆರಂಭವಾದಾಗಿನಿಂದ ಖಾದರ್ ಮುನ್ನಡೆ ಕಾಯ್ದುಕೊಂಡಿದ್ದರು.

ಇದೇ ವೇಳೆ ಬಿಜೆಪಿಯ ಸತೀಶ್ ಕುಂಪಲ 59,660 ಮತಗಳನ್ನು ಪಡೆದಿದ್ದಾರೆ.