ಉಡುಪಿ ಡಿಸಿ ವಿರುದ್ಧ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಿಎಂಗೆ ದೂರು

ಉಡುಪಿ: ದುಬೈನಿಂದ ಉಡುಪಿಗೆ ಬಂದ ಗರ್ಭಿಣಿಯೊಬ್ಬರ ಕ್ವಾರಂಟೈನ್ ಅವಧಿ ಮುಗಿದಿದ್ದರೂ ಅವರನ್ನು ಮನೆಗೆ ಕಳುಹಿಸದೆ ಉಡುಪಿ ಡಿಸಿ ಜಿ. ಜಗದೀಶ್ ಬೇಜವಾವ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.
ಗರ್ಭಿಣಿ ಉಡುಪಿಯ ಲಾಡ್ಜ್ ವೊಂದರಲ್ಲಿ 15 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. ಆದರೆ ಅವರ ಕ್ವಾರಂಟೈನ್ ಅವಧಿ ಮುಗಿದರೂ ಅವರನ್ನು ಇನ್ನೂ ಅಲ್ಲಿಯೇ ಇರಿಸಲಾಗಿದೆ. ಜಿಲ್ಲಾಡಳಿತ ಸರ್ಕಾರಿ ನಿಯಮ ಸರಿಯಾಗಿ ಪಾಲಿಸಿಲ್ಲ. ಒಂದೆಡೆ ಮನೆಗೆ ಕಳುಹಿಸಿಲ್ಲ. ಅಲ್ಲದೆ ಗರ್ಭಿಣಿಗೆ ಮನೆಯ ಅಹಾರ ಸೇವನೆಗೂ ತಡೆ ನೀಡಲಾಗಿದೆ ಎಂದು ಆರೋಪಿಸಿ ಅವರು ಟ್ವೀಟ್ ಮೂಲಕ ಸಿಎಂಗೆ ದೂರು ನೀಡಿದ್ದಾರೆ.