ಬ್ರಹ್ಮಾವರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ ದತ್ತು ಸ್ವೀಕೃತ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ

ಬ್ರಹ್ಮಾವರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ.) ಬೆಂಗಳೂರು ವತಿಯಿಂದ ದತ್ತು ಸ್ವೀಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ದಾನಿಗಳಾದ ಎಚ್.ಎಸ್. ಶೆಟ್ಟಿ ಅವರು ಕೊಡಮಾಡಿದ 2.5 ಕೋಟಿಗೂ ಅಧಿಕ ವೆಚ್ಚದ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಶುಕ್ರವಾರದಂದು ನಡೆಯಿತು.

ಕಟ್ಟಡದ ಶಿಲಾನ್ಯಾಸವನ್ನು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ಇದರ ಅಧ್ಯಕ್ಷ, ದಾನಿಗಳಾದ ಹೆಚ್. ಎಸ್ ಶೆಟ್ಟಿ ಹಾಗೂ ಶಾಸಕ ಕೆ. ರಘುಪತಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ಉಪಾಧ್ಯಕ್ಷ ನಾಗರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಪೌಢ ಶಾಲಾ ವಿಭಾಗದ ಅಧ್ಯಕ್ಷ ರಾಮಕೃಷ್ಣ, ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ವಿಭಾಗದ ಅಧ್ಯಕ್ಷ ಪಾಂಡುರಂಗ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗವೇಣಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಯಟ್ ಉಪ ಪ್ರಾಂಶುಪಾಲ ಅಶೋಕ್ ಕಾಮತ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಪ್ರಾಂಶುಪಾಲ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲ ಬಿ.ಟಿ ನಾಯ್ಕ್, ಮುಖ್ಯೋಪಾಧ್ಯಾಯ ದೇವ ಕುಮಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.