ಉಡುಪಿ, ಫೆ.24: ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಚುನಾವಣೆಯ, ರಾಜ್ಯ ಸಂಘದ ಉಪಾಧ್ಯಕ್ಷ (3) ಸ್ಥಾನಗಳಿಗೆ ಫೆಬ್ರವರಿ 27 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಡುಪಿ ಪತ್ರಿಕಾ ಭವನದಲ್ಲಿನ, ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮತದಾನ ನಡೆಯಲಿದೆ.
ಆದ್ದರಿಂದ ಅರ್ಹ ಎಲ್ಲಾ ಮತದಾರರು ತಮ್ಮ ಸದಸ್ಯತ್ವದ ಗುರುತಿನ ಚೀಟಿಯೊಂದಿಗೆ ಆಗಮಿಸಿ, ಮತ ಚಲಾಯಿಸುವಂತೆ ಕೋರಿದೆ.
ರಾಜ್ಯ ಸಂಘದ ಉಪಾಧ್ಯಕ್ಷ (3) ಸ್ಥಾನಕ್ಕೆ ಕಣದಲ್ಲಿರುವ ಅಭ್ಯರ್ಥಿಗಳ ವಿವರ ಹೀಗಿವೆ: ಅಜ್ಜಮಾಡ ರಮೇಶ್ ಕುಟ್ಟಪ್ಪ, ಬಂಗ್ಲೆ ಮಲ್ಲಿಕಾರ್ಜುನ, ಭವಾನಿಸಿಂಗ್ ಠಾಕೂರ, ಪುಂಡಲೀಕ.ಭೀ.ಬಾಳೋಜಿ.












