ಪ.ಜಾತಿ-ಪ.ಪಂಗಡದ ಯುವಕರಿಗೆ ನಾರಾಯಣ ಹೃದಯಾಲಯದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ
ಜನರಿಗೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ 6 ತಿಂಗಳ ಅವಧಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಮೊ.ನಂ: 8525808078, ವಿಕಾಸ್ ಮೊ.ನಂ:7018879650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.