ಬ್ರಹ್ಮಾವರ: ಯುವಕ-ಯುವತಿಯರಿಗಾಗಿ ರುಡ್‌ಸೆಟ್‌ನಲ್ಲಿ ಉಚಿತ ಕೌಶಲ್ಯಾಭಿವೃದ್ದಿ ತರಬೇತಿ

ಬ್ರಹ್ಮಾವರ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ, ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕೆ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟ, ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್‌ಗಳ ಸಹಯೋಗದೊಂದಿಗೆ ನಡೆಯುವ ರುಡ್‌ಸೆಟ್ ಸಂಸ್ಥೆಯು ಬ್ರಹ್ಮಾವರದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಇವರ ವತಿಯಿಂದ ಉಚಿತ ಊಟ, ವಸತಿ, ಸಮವಸ್ತ್ರ ಹಾಗೂ ತರಬೇತಿ ಕಿಟ್ ನೊಂದಿಗೆ ನಿರುದ್ಯೋಗಿ ಯುವಕ-ಯುವತಿಯರಿಗೆ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸುತ್ತಿದೆ.

ಅರ್ಹತೆಗಳು
# ಈ ತರಬೇತಿ ಪಡೆಯಲು ಬಯಸುವವರು 18 ರಿಂದ 45 ವರ್ಷದ ಒಳಗಿನ ಗ್ರಾಮೀಣ ಭಾಗದವರಾಗಿರಬೇಕು.
# ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿರಬೇಕು,
# ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಸಕ್ತರು ತಮ್ಮ ಹೆಸರು, ವಿಳಾಸ, ಬಿ.ಪಿ.ಎಲ್ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಅರ್ಜಿ ಪ್ರತಿಯನ್ನು ದೂ.ಸಂಖ್ಯೆ 9591233748 / 9611544930 / 9448348569 / 9844086383 / 9632561145/ 8861325564 ಗೆ ಕಳುಹಿಸಿಕೊಡಬಹುದು.

ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಲು ಇಮೇಲ್ ವಿಳಾಸ: rudbvr@gmail.com.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್: www.rudsetitraining.org ಗೆ ಭೇಟಿ ನೀಡಬಹುದು.