ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ  ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮವನ್ನು ಹೊಸ ತರಗತಿಯೊಂದಿಗೆ ಆರಂಭಿಸುತ್ತಿದೆ.

ಇದೇ ಬರುವ ಜುಲೈ 20ರ ಮಂಗಳವಾರದಿಂದ  ಹೊಸ ತರಗತಿಯು ಆರಂಭಗೊಳ್ಳಲಿದೆ. ಕಳೆದ 4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಅವರು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ.

ತರಬೇತಿ ಉಚಿತವಾಗಿದ್ದು, ಹೊಸ ತರಗತಿ ಪ್ರತೀ ಮಂಗಳವಾರ ಸಂಜೆ 5ರಿಂದ 6ರ ವರೆಗೆ ಉಡುಪಿಯ ಸೋದೆ ಮಠದಲ್ಲಿ ನಡೆಯಲಿದೆ.
ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ  ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ನೇರವಾಗಿ ಮಂಗಳವಾರದಂದು ತರಗತಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂ: ಸಂಖ್ಯೆ 9844212104 /  9663424981/9845150802 ಸಂಪರ್ಕಿಸಬಹುದು ಎಂದು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ತಿಳಿಸಿದೆ.