ಗುಂಪು ದಾಳಿ ನಡೆಸಿ ಗ್ರಾ.ಪಂ. ಸದಸ್ಯನ ಕೊಲೆ; ಮಂಗಳೂರಿನ ಅಡ್ಯಾರ್ ಬಳಿ ಘಟನೆ

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ಶುಕ್ರವಾರ ಸಂಜೆ ಗುಂಪೊಂದು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅಡ್ಯಾರ್ ಸಮೀಪ ನಿನ್ನೆ ಸಂಜೆ ತಂಡವೊಂದು ಯಾಕೂಬ್ ಮೇಲೆ ದಾಳಿ ನಡೆಸಿದ್ದು ಯಾಕೂಬ್ ರಿಕ್ಷಾದಲ್ಲಿ ಹೈ ಲ್ಯಾಂಡ್ ಆಸ್ಪತ್ರೆಗೆ ತೆರಳಿದ್ದರು. ಆದರೆ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾಕೂಬ್ ಅಡ್ಯಾರ್ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ. ದಾಳಿಗೆ ವೈಯಕ್ತಿಕ ಮತ್ತು ರಾಜಕೀಯ ಹಿನ್ನೆಲೆ ಶಂಕಿಸಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.