ಕೇರಳದ ಪಾಲಕ್ಕಾಡಿನಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಸಂಭ್ರಮದ ಗಣೇಶೋತ್ಸವ

ಪಾಲಕ್ಕಾಡ್: ತಮಿಳುನಾಡು ಬಿಜೆಪಿ ನಾಯಕ, ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಕೇರಳದ ಪಾಲಕ್ಕಾಡಿನಲ್ಲಿ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗಿದೆ. ಪಾಲಕ್ಕಾಡಿನ ಜಿಲ್ಲಾ ಗಣೇಶೋತ್ಸವ ಸಮಿತಿಯು ವಿನಾಯಕ ಚತುರ್ಥಿ ಹಬ್ಬವನ್ನು ಆಯೋಜಿಸಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ” ಪಾಲಕಾಡ್ ಜಿಲ್ಲಾ ಗಣೇಶೋತ್ಸವ ಸಮಿತಿಯು ಆಯೋಜಿಸಿದ್ದ ವಿನಾಯಕ ಚತುರ್ಥಿಯನ್ನು ಆಚರಿಸಲು ಪಾಲಕಾಡಿನಲ್ಲಿ ಸಾವಿರಾರು ಜನರು ಸೇರುವುದನ್ನು ತಡೆಯಲು ಭಾರೀ ಮಳೆಯಿಂದಾಗಲೀ ಅಥವಾ ಕಮ್ಯುನಿಸ್ಟ್ ಆಡಳಿತದಿಂದ ಸಂಘಟಿತ ವಿದ್ಯುತ್ ಕಡಿತದಿಂದಾಗಲೀ ಸಾಧ್ಯವಾಗಲಿಲ್ಲ” ಎಂದಿದ್ದಾರೆ.

“ಬಿಜೆಪಿ ಫಾರ್ ಕೇರಳದ ಕೇಡರ್ ಗಳು ತಮ್ಮ ನಿರ್ಭೀತ ವಿಧಾನದಿಂದ ಜನರ ಮನ ಗೆದ್ದಿದ್ದಾರೆ. ಜಿಲ್ಲಾ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಡಿ.ಸುದೇವನ್ ರವರಿಗೆ ವಿಶೇಷವಾಗಿ ನಮ್ಮ ಪ್ರೀತಿಯ ಪ್ರಧಾನಿ ಕೊಚ್ಚಿಯಲ್ಲಿರುವಾಗ ಈ ಕಾರ್ಯಕ್ರಮಕ್ಕೆ ಆಯೋಜಿಸಿದ್ದಕ್ಕೆ ಅಭಿನಂದನೆಗಳು”. ಎಂದು ಬರೆದುಕೊಂಡಿದ್ದಾರೆ.

ಚಿತ್ರಕೃಪೆ: ಕೆ.ಅಣ್ಣಾಮಲೈ/ಟ್ವಿಟರ್